ಎಸ್ಟಿಪಿ ನಿರ್ವಹಣೆ ಕುರಿತ ಸಮಗ್ರ ವರದಿ ಸಲ್ಲಿಸಿ; ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
- by Jagan Ramesh
- June 19, 2025
- 240 Views

ಬೆಂಗಳೂರು: ಮಲ ಹೊರುವ ಮತ್ತು ಮನುಷ್ಯರಿಂದ ಶೌಚ ಗುಂಡಿಗಳನ್ನು ಸ್ವಚ್ಛಗೊಳಿಸುವ ಅನಿಷ್ಠ ಪದ್ಧತಿ ನಿಷಿದ್ಧವಾಗಿದ್ದರೂ, ಇಂದಿಗೂ ಅದು ಮುಂದುವರಿಯುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದಿರುವ ಹೈಕೋರ್ಟ್, ರಾಜ್ಯದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ (ಎಸ್ಟಿಪಿ) ನಿರ್ವಹಣೆ ಕುರಿತು 4 ವಾರಗಳಲ್ಲಿ ಸಮಗ್ರ ಮಾಹಿತಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.
ರಾಜ್ಯದಲ್ಲಿ ಶೌಚ ಗುಂಡಿ, ಒಳಚರಂಡಿ ಹಾಗೂ ಎಸ್ಟಿಪಿಗಳನ್ನು ಸ್ವಚ್ಛಗೊಳಿಸಲು ಮನುಷ್ಯರನ್ನು ಬಳಸಿಕೊಳ್ಳುವುದನ್ನು ತಕ್ಷಣ ನಿಲ್ಲಿಸಲು ನಿರ್ದೇಶಿಸುವಂತೆ ಕೋರಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಟ್ರೇಡ್ ಯೂನಿಯನ್ (ಎಐಸಿಸಿಟಿಯು) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಅರ್ಜಿ ಗಮನಿಸಿದ ನ್ಯಾಯಪೀಠ, ಮಲ ಹೊರುವ ಪದ್ದತಿ ಇನ್ನೂ ಜೀವಂತವಾಗಿದೆಯೇ? ಎಂದು ಅಚ್ಚರಿ ವ್ಯಕ್ತಪಡಿಸಿತಲ್ಲದೆ, ಸುಪ್ರೀಂಕೋರ್ಟ್ ಈಗಾಗಲೇ ಇದಕ್ಕೆ ಪೂರ್ಣ ವಿರಾಮ ಹಾಕಿದೆಯಲ್ಲ ಎಂದು ಪ್ರಶ್ನಿಸಿತು.
ಅರ್ಜಿದಾರರ ಪರ ವಕೀಲೆ ಮೈತ್ರೇಯಿ ಕೃಷ್ಣನ್, ಮಲ ಹೊರುವ ಪದ್ದತಿ ನಿಷೇಧಿಸಲಾಗಿದ್ದರೂ ಅದು ಬೇರೆ ರೂಪದಲ್ಲಿ ಜಾರಿಯಲ್ಲಿದೆ. ಶೌಚ ಗುಂಡಿಗಳನ್ನು ಸ್ವಚ್ಛಗೊಳಿಸಲು ಮನುಷ್ಯರನ್ನು ಬಳಸಿಕೊಳ್ಳುವ ಘಟನೆಗಳು ಆಗಾಗ ನಡೆಯುತ್ತಲೇ ಇವೆ. ಇತ್ತಿಚಿಗೆ ಎಸ್ಟಿಪಿ ಘಟಕವೊಂದನ್ನು ಸ್ವಚ್ಛಗೊಳಿಸುವಾಗ ಇಬ್ಬರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಮಾರ್ಗಸೂಚಿ ಇಲ್ಲ:
ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ನಿರ್ವಹಣೆಗೆ ನಿರ್ದಿಷ್ಠ ವ್ಯವಸ್ಥೆ, ಉಸ್ತುವಾರಿ ಅಥವಾ ಮಾರ್ಗಸೂಚಿ ಇಲ್ಲವಾಗಿದೆ. ಎಸ್ಟಿಪಿಗಳು ಮಾಲಿನ್ಯ ನಿಯಂತ್ರಣ ಮಂಡಳಿ ವ್ಯಾಪ್ತಿಗೆ ಬರುತ್ತವೆ. ಆದರೆ, ಮಂಡಳಿ ಅದನ್ನು ಪರಿಸರದ ದೃಷ್ಟಿಯಿಂದ ಮಾತ್ರ ನೋಡುತ್ತದೆ. ದುರ್ಘಟನೆಯಿಂದ ಪ್ರಾಣ ಹಾನಿ ಸಂಭವಿಸಿದರೆ ತನಗೆ ಸಂಬಂಧವಿಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳುತ್ತದೆ. ಆದ್ದರಿಂದ, ಎಸ್ಟಿಪಿಗಳ ನಿರ್ವಹಣೆ ಬಗ್ಗೆ ಸಮಗ್ರ ಪರಿಶೀಲನೆ ನಡೆಸಬೇಕು ಹಾಗೂ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಈ ಮನವಿ ಪರಿಗಣಿಸಿದ ನ್ಯಾಯಪೀಠ, ಶೌಚ ಗುಂಡಿಗಳು, ಎಸ್ಟಿಪಿಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಮನುಷ್ಯರನ್ನು ಬಳಸಿಕೊಳ್ಳುತ್ತಿರುವುದು ಮತ್ತು ಆದರಿಂದ ಪ್ರಾಣ ಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಮನುಷ್ಯರು ಪ್ರಾಣ ಕಳೆದುಕೊಳ್ಳುತ್ತಿರುವ ಇಂತಹ ಸಂಗತಿಗಳು ಸರ್ಕಾರಕ್ಕೆ ಆದ್ಯತೆಯ ವಿಷಯವಾಗಬೇಕು. ಆದ್ದರಿಂದ, ರಾಜ್ಯದ ಎಲ್ಲ ಕೈಗಾರಿಕಾ ಪ್ರದೇಶಗಳು ಹಾಗೂ ಜನ%B
Comments (0)